5 ವರ್ಷ ನಾನೇ ಸಿಎಂ: ತಾಯಿ ಚಾಮುಂಡಿ ಕೃಪೆಯಿಂದ ಇಲ್ಲಿವರೆಗೂ ತಪ್ಪು ಮಾಡಿಲ್ಲ- ಸಿಎಂ ಸಿದ್ದರಾಮಯ್ಯ

ಮೈಸೂರು,ಅಕ್ಟೋಬರ್,3,2024 (www.justkannada.in): ರಾಜ್ಯದಲ್ಲಿ ದೇವರಾಜ ಅರಸು ಬಿಟ್ಟರೇ 5 ವರ್ಷ ಸಿಎಂ ಆಗಿದ್ದೂ ನಾನೇ ಅದು ಸಿದ್ದರಾಮಯ್ಯ. ಮುಂದಿನ 5 ವರ್ಷಗಳಲ್ಲೂ ಕೂಡ ನಾನೇ ಸಿಎಂ  ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಚಾಮುಂಡಿ ಬೆಟ್ಟದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಡಿಕೆ ಶಿವಕುಮಾರ್ ಇಬ್ಬರು ಒಟ್ಟಿಗೆ ಬೆಟ್ಟಕ್ಕೆ ಬಂದು ಚಾಮುಂಡಿ ತಾಯಿಯ ಪೂಜೆ ಮಾಡಿ 5 ಗ್ಯಾರಂಟಿಗೆ ಶಕ್ತಿ ಕೊಡಮ್ಮ ಅಂತ ಕೇಳಿದ್ದವು. ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಎಲ್ಲಾ ಗ್ಯಾರಂಟಿ ಜಾರಿ ಮಾಡಿದ್ದೇವೆ ಇದು ಚಾಮುಂಡಿಯ ಆಶೀರ್ವಾದ. ಈಗಲೂ ಎಷ್ಟೇ ತೊಡಕು ಬಂದ್ರು ತಾಯಿಯ ಚಾಮುಂಡೇಶ್ವರಿ ಆಶೀರ್ವಾದ ಇದೆ ನನಗೆ ಎಂದು ಹೇಳಿದರು.

ಚಾಮುಂಡಿ ಕೃಪೆಯಿಂದ ಇಲ್ಲಿವರೆಗೂ ತಪ್ಪು ಮಾಡಿಲ್ಲ

ಜನರ, ದೇವರ ಆಶೀರ್ವಾದ ಇರೋವರೆಗೂ ನನ್ನ ಯಾರಿಂದಲೂ ಏನು ಮಾಡಲು ಸಾಧ್ಯವಿಲ್ಲ. ಏನಪ್ಪಾ ಜಿಟಿ ದೇವೇಗೌಡ ನೀನೇ ನನ್ನ ಒಂದು ಬಾರಿ ಸೋಲಿಸಿದ್ದೆ ನಗೆ ಚಟಾಕಿ  ಹಾರಿಸಿದ ಸಿಎಂ ಸಿದ್ದರಾಮಯ್ಯ, ಒಟ್ಟು 9 ಚುನಾವಣೆ ಗೆದ್ದಿದ್ದೇನೆ. 40 ವರ್ಷ ಮಂತ್ರಿಯೇ ಆಗಿದ್ದೇನೆ. ಚಾಮುಂಡಿ ಕೃಪೆಯಿಂದ ಇಲ್ಲಿವರೆಗೂ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ರೆ ಇಷ್ಟು ವರ್ಷ ಧೀರ್ಘ ರಾಜಕಾರಣ ಮಾಡಲು ಆಗುತ್ತಿರಲಿಲ್ಲ. ನಾನು ಜಿಟಿ ದೇವೇಗೌಡ ಒಂದೇ ತಾಲ್ಲೂಕು. ಜಿಟಿ ದೇವೇಗೌಡ ನೀನೇ ಒಂದು ಸಲ  ಸೋಲಿಸಿಬಿಟ್ಟೆ. ನಾನು ಮಂತ್ರಿಯಾಗಿ 40 ವರ್ಷಗಳಾಯಿತು. ನಾನು ಯಾವ ತಪ್ಪು ಮಾಡಿಲ್ಲ ಮಾಡಿದ್ರೆ ಸುದೀರ್ಘ ರಾಜಕೀಯದಲ್ಲಿ ಇರುತ್ತಿರಲಿಲ್ಲ. ಜಿಟಿ ದೇವೇಗೌಡ ಸತ್ಯಕ್ಕೆ ಜಯ ಸಿಗ್ಬೇಕು ಎಂದಿರುವುದು ನನಗೆ ಮತ್ತಷ್ಟು ಬಲ ಬಂದಿದೆ ಎಂದರು.

 

Key words: I am CM, 5 years, mysore Dasara, CM Siddaramaiah