5 ವರ್ಷ ಇರ್ತಾರೋ 3 ವರ್ಷ ಇರ್ತಾರೋ ಗೊತ್ತಿಲ್ಲ: ಆದ್ರೆ ಸಿದ್ದರಾಮಯ್ಯ ನಮ್ಮ ಸಿಎಂ- ಸಚಿವ ಸತೀಶ್ ಜಾರಕಿಹೊಳಿ

ಮೈಸೂರು,ಅಕ್ಟೋಬರ್,8,2024 (www.justkannada.in): ಸಿದ್ದರಾಮಯ್ಯ ನವರೇ ನಮ್ಮ ಮುಖ್ಯಮಂತ್ರಿ. ಸದ್ಯಕ್ಕೆ ಸಿಎಂ ಇದ್ದಾರೆ, ಯಾವ ಬದಲಾವಣೆ ಇಲ್ಲ. 5 ವರ್ಷ ಇರುತ್ತಾರೋ 3 ವರ್ಷ ಇರುತ್ತಾರೋ ಅದು ನನಗೆ ಗೊತ್ತಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಇಂದು ಮೈಸೂರಿನಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಸಿಎಂ ಆಗಲು ಯಾರಿಗೆ ತಾನೆ ಇಷ್ಟ ಇರಲ್ಲ. ನನ್ನ ಮಗಳು ಆಸೆ ಪಡುವುದರಲ್ಲಿ ತಪ್ಪೇನಿದೆ. ಕಳೆದ ಐದು ವರ್ಷದಿಂದ ಎಲ್ಲರೂ ಸಿಎಂ ಆಗಬೇಕು ಅಂತಿದ್ದಾರೆ ಸದ್ಯಕ್ಕೆ ಸಿಎಂ ಇದ್ದಾರೆ, ಯಾವ ಬದಲಾವಣೆ ಇಲ್ಲ. ಈವತ್ತು ಮಹದೇವಪ್ಪ ಅವರನ್ನ ಭೇಟಿ ಮಾಡುತ್ತೇನೆ. ಮೈಸೂರು ಭಾಗದ ಶಾಸಕರನ್ನು ಭೇಟಿ ಮಾಡುತ್ತೇನೆ. ನಿನ್ನೆಯಿಂದಲೂ ಹಲವರು ಭೇಟಿ ಮಾಡಿದ್ದಾರೆ. ನಾನು ಸಚಿವನಾಗಿರುವ ಕಾರಣಕ್ಕೆ ಭೇಟಿ ಆಗುತ್ತಾರೆ. ಹಲವರು ನನ್ನನ್ನ ಭೇಟಿ ಮಾಡಿದ್ದಾರೆ ಎಂದರು.

ಸಿದ್ದರಾಮಯ್ಯ ನವರೇ ನಮ್ಮ ಮುಖ್ಯಮಂತ್ರಿ. 5 ವರ್ಷ ಇರುತ್ತಾರೋ 3 ವರ್ಷ ಇರುತ್ತಾರೋ ಅದು ನನಗೆ ಗೊತ್ತಿಲ್ಲ. ಅದನ್ನ ನೀವು ಹೈಕಮಾಂಡ್ ಗೆ ಕೇಳಿ. ಆದರೆ ಸಿದ್ದರಾಮಯ್ಯ ಅವರೇ ನಮ್ಮ ಸಿಎಂ ಅದರಲ್ಲಿ ಬೇರೆ ಯಾವುದೇ ಪ್ರಶ್ನೆಯೂ ಇಲ್ಲ. ನಾನು ಅವರ ಜೊತೆ ಸಚಿವನಾಗಿ ಕೆಲಸ ಮಾಡುತ್ತೇನೆ. ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಅಂತ ಚರ್ಚೆಗಳೂ ನಡೆದಿಲ್ಲ. ಪಕ್ಷಗಳು, ಮಾಧ್ಯಮಗಳು ಚರ್ಚೆ ಮಾಡುತ್ತಿವೆ. ವಿಪಕ್ಷ ನಾಯಕರು ಪ್ರೀತಿಯಿಂದ ನಮ್ಮ ಹೆಸರು ಹೇಳುತಿದ್ದಾರೆ. ಆದರೆ ನಮ್ಮಲ್ಲಿ ಅಂತ ಬೆಳವಣಿಗೆ ನಡೆಇದಿಲ್ಲ. ನಾನು ಈ ವಿಚಾರವನ್ನ ಹಲವು ಬಾರಿ ಸ್ಪಷ್ಟ ಪಡಿಸಿದ್ದೇನೆ. ಅವರವರ ಬೆಂಬಲಿಗರು ಅವರ ನಾಯಕರಿಗೆ ಮುಂದಿನ ಸಿಎಂ ಎಂದು ಜೈಕಾರ ಹಾಕುವುದು ಸರ್ವ ಸಾಮಾನ್ಯ. ಅದನ್ನೇ ಇಟ್ಟುಕೊಂಡು ಏನೋ ಬದಲಾವಣೆ ಆಗುತ್ತದೆ ಎಂದು ಹೇಳುವುದು ಸರಿಯಲ್ಲ ಎಂದರು.

ಡಿಕೆ ಶಿವಕುಮಾರ್ ವಿಚಾರ ಮತ್ತೊಬ್ಬರ ವಿಚಾರ ನಾನೇನು ಹೇಳಲು ಸಾಧ್ಯವಿಲ್ಲ. ರಾಜಕಾರಣಿಗಳು ಸೇರಿದಾಗ ರಾಜಕಾರಣ ಚರ್ಚೆ ಮಾಡುತ್ತೇವೆ. ಉದ್ಯಮಿಗಳು ಸೇರಿದಾಗ ಬ್ಯುಸಿನೆಸ್ ಚರ್ಚೆ ಮಾಡುತ್ತಾರೆ. ಇಂದು ಮೈಸೂರಿನ ಭೇಟಿ ಮಹತ್ತರ ವಿಚಾರ ಇಲ್ಲ. ಇಡೀ ದಿನ‌ ಮೈಸೂರು ದಸರಾ ನೋಡಲು ಬಂದಿದ್ದೇನೆ ಎಂದು  ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಹರಿಯಾಣ, ಜಮ್ಮು ಕಾಶ್ಮೀರದಲ್ಲಿ‌ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ ಸಿಕ್ಕಿದೆ.  ದೇಶಾದ್ಯಂತ ಕಾಂಗ್ರೆಸ್ ಪರ‌ ಅಲೆಯಿದೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ಒಳ್ಳೆಯ ಬೆಳವಣಿಗೆ ಆಗಲಿದೆ ಎಂದು ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

Key words: Siddaramaiah, our CM, Minister, Satish Jarakiholi, mysore