ಕೋವಿಡ್ ಹಗರಣ ತನಿಖೆಗೆ ಎಸ್ಐಟಿ ರಚನೆ: ಸರ್ಕಾರದ ವಿರುದ್ದ ಕೇಂದ್ರ ಸಚಿವ ಹೆಚ್.ಡಿಕೆ ವಾಗ್ದಾಳಿ

ಬೆಂಗಳೂರು,ಅಕ್ಟೋಬರ್,10,2024 (www.justkannada.in):  ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಎಸ್ ಐಟಿ ರಚನೆಗೆ ನಿರ್ಧರಿಸಿರುವ ರಾಜ್ಯ ಸರ್ಕಾರದ ವಿರುದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ಒಂದುವರೆ ವರ್ಷದಿಂದ ಈ ಭಜನೆ ನಡೆಯುತ್ತಿದೆ ವಿಪಕ್ಷದಲ್ಲಿದ್ದಾಗ ಹೆಚ್ಚು ಚರ್ಚೆ ಮಾಡಿದ್ದಾರೆ. ಇಲ್ಲಿವರೆಗೆ ಯಾವುದೇ ರೀತಿಯ ತನಿಖೆಯಾಗಿಲ್ಲ ಈಗ ಎಸ್ ಐಟಿ ತನಿಖೆಗೆ ಯಾಕೆ ನೀಡಿದ್ದೀರಿ?  ಇಲ್ಲಿವರೆಗೆ ಯಾಕೆ ತನಿಖೆ ಮಾಡಲಿಲ್ಲ.  ನಿಜವಾಗಿ ಹಣ ಲೂಟಿ ಆಗಿದ್ರೆ ತನಿಖೆ ಆಗಬೇಕಿತ್ತು. ನಿಮ್ಮ ಪರಿಸ್ಥಿತಿಗಳ ರಕ್ಷಣೆ ಪಡೆಯಲು ಈ ತಂತ್ರ ರೂಪಿಸಿದ್ದೀರಿ.  ಇದು ಯಾವುದೇ ರೀತಿಯಲ್ಲಿ ಫಲ ನೀಡಲ್ಲ ಎಂದು ಕಿಡಿಕಾರಿದರು.

ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣ ಕುರಿತು ತನಿಖೆ ನಡೆಸಲು ಎಸ್ ಐಟಿ ರಚನೆ ಮಾಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

Key words: Formation, SIT, probe, Covid scam, Union Minister, HDK