ರೇಣುಕಾಸ್ವಾಮಿ ಕೊಲೆ ಕೇಸ್: ಎ1 ಪವಿತ್ರಾಗೌಡ ಜಾಮೀನು ಅರ್ಜಿ ವಜಾ

ಬೆಂಗಳೂರು,ಅಕ್ಟೋಬರ್,14,2024 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲನೇ ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿದೆ.

ಈ ಮೂಲಕ ಪವಿತ್ರಾಗೌಡಗೆ ಜೈಲೇಗತಿಯಾಗಿದೆ. ಪವಿತ್ರಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಈ ಕುರಿತು ಆದೇಶ ಪ್ರಕಟಿಸಿದ್ದು ಪವಿತ್ರಾಗೌಡ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿದೆ.

ಪ್ರಕರಣದ ಎ 13 ದೀಪಕ್, ಎ8 ರವಿಶಂಕರ್ ಗೆ ಕೋರ್ಟ್ ಜಾಮೀನು ಮಂಜೂರು  ಮಾಡಿದೆ. ಹಾಗೆಯೇ ಎ11 ನಾಗರಾಜು, ಎ12 ಲಕ್ಷ್ಮಣ್  ಜಾಮೀನು ಅರ್ಜಿ ವಜಾಗೊಳಿಸಿದೆ.

Key words: Renukaswamy, murder case,  Pavitra Gowda,  bail application, dismissed