ಘೋರ ದುರಂತ: ಬಂಡೆ ಉರುಳಿ ಬಿದ್ದು ಇಬ್ಬರು ಮಕ್ಕಳು ಸಾವು

ರಾಯಚೂರು, ಅಗಸ್ಟ್, 15,2024 (www.justkannada.in):  ಹೊಲದ ಬದುವಿಗೆ ಹಾಕಿದ್ದ ಬಂಡೆ ಉರುಳಿಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘೋರ ದುರಂತ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಡೂರು ತಾಂಡಾದಲ್ಲಿ ಈ ದುರ್ಘಟನೆ ನಡೆದಿದೆ. ಮಂಜುನಾಥ್​ (9), ವೈಶಾಲಿ(8) ಮೃತಪಟ್ಟ ಮಕ್ಕಳು. ಇನ್ನು ಘಟನೆಯಲ್ಲಿ ಓರ್ವ ಮಗುವಿನ ಕಾಲು ಮುರಿದಿದ್ದು, ಸದ್ಯ ಗಾಯಾಳು ಮಗುವಿಗೆ ಲಿಂಗಸಗೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಲೆಗೆ ದಸರಾ ರಜೆ ಹಿನ್ನೆಲೆಯಲ್ಲಿ ಮೂವರು ಮಕ್ಕಳು ಪೋಷಕರ ಜೊತೆಗೆ ಜಮೀನಿಗೆ ಹೋಗಿದ್ದರು. ಈ ವೇಳೆ ಜಮೀನಿನ ಬದುವಿನಲ್ಲಿ ಹಾಕಲಾಗಿದ್ದ ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದರು.  ಈ ಸಮಯದಲ್ಲಿ ಕಲ್ಲು ಬಂಡೆ ಜಾರಿ ಬಿದ್ದು ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ.

Key words: Two children, death, rock fall, Raichur