ರಾಜ್ಯ ಸರ್ಕಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಳ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ.

ಬೆಂಗಳೂರು,ಏಪ್ರಿಲ್,10,2025 (www.justkannada.in): ರಾಜ್ಯ ಸರ್ಕಾರದಲ್ಲಿ ಮಧ್ಯರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘವು ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇಬ್ಬರು ಸಚಿವರಿಗೆ ಪತ್ರ ಬರೆದಿದೆ ಎನ್ನಲಾಗಿದೆ.

ಸರ್ಕಾರದಲಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು,  ಮಧ್ಯವರ್ತಿಗಳು ಅಂದರೆ ಕಾಣದ ಕೈಗಳು ಹದಗೆಡಿಸುತ್ತಿವೆ . ನಾಲ್ಕು ನಿಗಮಗಳ ಎಂಡಿ ಕರೆಸಿ ಸಭೆ ನಡೆಸಿ . ಕಾಣದ ಕೈಗಳ ಬಗ್ಗೆ ಎಂಡಿಗಳ ಜೊತೆ ಚರ್ಚಿಸಿ ಎಂದು ಗುತ್ತಿಗೆದಾರರ ಸಂಘವು  ಬರೆದಿರುವ ಪತ್ರದಲ್ಲಿ ಮನವಿ ಮಾಡಿದೆ.

ಈ ಕುರಿತು ಮಾತನಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ಬಿಜೆಪಿಗಿಂತ ಕಾಂಗ್ರೆಸ್ ಅವಧಿಯಲ್ಲೇ  ಹೆಚ್ಚು  ಭ್ರಷ್ಟಾಚಾರ ನಡೆಯುತ್ತಿದೆ.  ಸರ್ಕಾರದಲ್ಲಿ ಸಚಿವರ ಸಂಬಂಧಿಕರಿಂದಲೇ ಕಮಿಷನ್. ಹೆಚ್ಚು ಕಮಿಷನ್ ಕೊಟ್ಟವರಿಗೆ ಬಾಕಿ ಹಣ ರಿಲೀಸ್ ಆಗುತ್ತದೆ ಎಂದು ಆರೋಪಿಸಿದ್ದಾರೆ.

Key words: Increasing, brokers, Contractors Association, Letter, CM