ಆಷಾಢ ಮಾಸದ ವೇಳೆ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ಕುರಿತು ಸಚಿವ ಎಸ್ ಟಿ ಸೋಮಶೇಖರ್ ಪ್ರತಿಕ್ರಿಯಿಸಿದ್ದು ಹೀಗೆ.

ಮೈಸೂರು,ಜುಲೈ,6,2021(www.justkannada.in): ಮುಂದಿನ ವಾರದಿಂದ ಆಷಾಢ ಶುಕ್ರವಾರ ಹಿನ್ನಲೆ, ಪ್ರತಿ ಆಷಾಢ ಮಾಸದಲ್ಲು ಲಕ್ಷಾಂತರ ಸಂಖ್ಯೆಯ ಭಕ್ತರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬರುತ್ತಾರೆ.ಈಗಾಗಿ ಭಕ್ತರ ಪ್ರವೇಶ ಬೇಕೋ ಬೇಡವೋ ಎಂದು ಇಂದು ತೀರ್ಮಾನ ಮಾಡುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.jk

ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ದೇಗುಲದ ಅರ್ಚಕರು, ಆಡಳಿತ ಮಂಡಳಿ ಬಳಿ ಮಾಹಿತಿ ಪಡೆದಿದ್ದೇನೆ. ಇವತ್ತು ಸಭೆ ನಡೆಸಿ  ಆಷಾಢ ಮಾಸದ ವೇಳೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ಕುರಿತು  ತೀರ್ಮಾನ ಕೈಗೊಳ್ಳುತ್ತೇನೆ ಎಂದರು.

Key words: ashada -Devotees- enter- Chamundi Hill –today- Decision