ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ವಿಚಾರಣೆ ಮುಕ್ತಾಯ:  ಹೇಳಿಕೆ ದಾಖಲು

ಬೆಂಗಳೂರು,ಜೂನ್,19,2024 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ವಿಚಾರಣೆಗೆ ಹಾಜರಾಗಿದ್ದು ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಪ್ರಕರಣ ಸಂಬಂಧ ಇಂದು ವಿಜಯಲಕ್ಷ್ಮಿ ಅವರು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಸತತ 5 ಗಂಟೆ 20 ನಿಮಿಷಗಳ ಕಾಲ ವಿಚಾರಣೆ ನಡೆದು ಮುಕ್ತಾಯವಾಗಿದ್ದು  ವಿಚಾರಣೆ ಮುಗಿಸಿ ವಿಜಯಲಕ್ಷ್ಮಿ ಅವರು ವಾಪಸ್ ತೆರಳಿದ್ದಾರೆ.

ವಿಜಯಲಕ್ಷ್ಮಿ ಅವರಿಂದ ಕಾಮಾಕ್ಷೀಪಾಳ್ಯ ಠಾಣಾ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

Key words: Actor, Darshan, wife, Vijayalakshmi, hearing