ಚನ್ನಪಟ್ಟಣ ಬೈ ಎಲೆಕ್ಷನ್: ‘ಕೈ’  ಟಿಕೆಟ್ ಗೆ ಬೇಡಿಕೆಯಿಟ್ಟ ತೇಜಸ್ವಿನಿಗೌಡ

ರಾಮನಗರ, ಅಕ್ಟೋಬರ್,17,2024 (www.justkannada.in): ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ರಾಜಕೀಯ ಚಟುವಟಿಕೆ ಗರಿಗೆದರಿದೆ. ಅದರಲ್ಲೂ ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಟಿಕೆಟ್ ಗೆ  ಕಾಂಗ್ರೆಸ್ ಮುಖಂಡೆ ತೇಜಸ್ವಿನಿಗೌಡ ಬೇಡಿಕೆ ಇಟ್ಟಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ತೇಜಸ್ವಿನಿಗೌಡ, 2004, 2019ರಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದೇನೆ. ನನಗೆ ಚನ್ನಪಟ್ಟಣ ಕ್ಷೇತ್ರದ ಜೊತೆ 2 ದಶಕಗಳ ಒಡನಾಟವಿದೆ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಟಿಕೆಟ್ ನೀಡಿ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧಳಾಗಿದ್ದೇನೆ  ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್, ಕೆಸಿ ವೇಣುಗೋಪಾಲ್ ಅವರಿ​ಗೂ ತೇಜಸ್ವಿನಿಗೌಡ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಚನ್ನಪಟ್ಟಣ ಕ್ಷೇತ್ರದಿಂದ ನಾನೇ ಅಭ್ಯರ್ಥಿ ಎಂದು ಹಲವು ಬಾರಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

Key words: Channapatna, by-election, Tejaswinigowda, congress, ticket