ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ವಿಚಾರ: ಸ್ಪಷ್ಟನೆ ನೀಡಿದ ಶಾಸಕ ಎಸ್.ಟಿ ಸೋಮಶೇಖರ್.

ಬೆಂಗಳೂರು,ಆಗಸ್ಟ್,21,2023(www.justkannada.in): ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಎಸ್.ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್,  ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ನಾನು ಕ್ಷೇತ್ರದ ವಿಚಾರವಾಗಿ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿದ್ದೆ. ಕ್ಷೇತ್ರದ ವಿಚಾರವಾಗಿ ಸಿಎಂ ಭೇಟಿಯಾಗುವುದು ತಪ್ಪಾ? ಎಂದು ಪ್ರಶ್ನಿಸಿದರು.

ಪಕ್ಷದ ಕೆಲ ಮುಖಂಡರು ಕಾಂಗ್ರೆಸ್​ ಸೇರ್ತಾರೆಂದು ವದಂತಿ ಇದೆ. ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಯುತ್ತಿದೆ. ಬಿಎಸ್ ವೈ ನನ್ನ ಜೊತೆ ಮಾತನಾಡಿದ್ದಾರೆ. ನನಗೆ ತಡವಾಗಿ ಮೆಸೇಜ್ ಸಿಕ್ಕಿದೆ ಎಂದು ಹೇಳಿದ್ದೇನೆ. ನನ್ನನ್ನ ಬಿಜೆಪಿಗೆ ಕರೆತಂದವರು ಬಿಎಸ್ ವೈ.  ಸಚಿವರನ್ನಾಗಿ ಮಾಡಿ ಮೈಸೂರು ಜಿಲ್ಲಾ ಉಸ್ತುವಾರಿ ನೀಡಿದ್ದರು. ಬಿಎಸ್ ವೈ ಅವರನ್ನು ಹೊರತಾಗಿ ನಾನು ಏನು ಮಾಡಲ್ಲ. ಮನೆಗೆ ಬನ್ನಿ ಎಂದು ಕರೆದಿದ್ದಾರೆ. ಬಿಎಸ್ ವೈ ಜೊತೆ ಮಾತನಾಡುತ್ತೇನೆ ಎಂದು ಎಸ್.ಟಿ ಸೋಮಶೇಖರ್ ತಿಳಿಸಿದರು.

Key words: Congress-BJP –MLA -ST Somashekhar