ಇಡಿಯಿಂದ ಕಾಂಗ್ರೆಸ್ ಶಾಸಕ ಅರೆಸ್ಟ್

ಹರಿಯಾಣ,ಜುಲೈ,20,2024 (www.justkannada.in):  ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ  ಹರಿಯಾಣದ ಸೋನೆಪತ್ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಇ.ಡಿ ಅಧಿಕಾರಿಗಳು ಸುರೇಂದರ್ ಪನ್ವಾರ್ ಮನೆ ಹಾಗೂ ಕಚೇರಿಗಳ ಮೇಲೆ ಜನವರಿಯಲ್ಲಿ ದಾಳಿ ನಡೆಸಿದ್ದರು. ಜನವರಿಯಲ್ಲಿ, ಸೋನೆಪತ್ನಲ್ಲಿರುವ ಪನ್ವಾರ್ ಮತ್ತು ಅವರ ಸಹಾಯಕರಿಗೆ ಸಂಬಂಧಿಸಿದ ಆವರಣಗಳು, ಕರ್ನಾಲ್ ಲ್ಲಿನರುವ ಬಿಜೆಪಿ ಮುಖಂಡ ಮನೋಜ್ ವಾಧ್ವಾ ಮತ್ತು ಯಮುನಾನಗರ ಜಿಲ್ಲೆಯ ಐಎನ್‌ಎಲ್ಡಿ ಶಾಸಕ ದಿಲ್ಬಾಗ್ ಸಿಂಗ್ ಮತ್ತು ಅವರ ಸಹಚರರ ನಿವಾಸಗಳಲ್ಲಿ ಇಡಿ ಶೋಧ ನಡೆಸಿತ್ತು. ಹೆಚ್ಚಿನ ವಿಚಾರಣೆಗಾಗಿ ಸಿಂಗ್ ಅವರನ್ನು ನಂತರ ಬಂಧಿಸಲಾಗಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ವಿಧಿಸಿರುವ ನಿಷೇಧದ ನಡುವೆಯೂ ಯಮುನಾನಗರ ಮತ್ತು ಸಮೀಪದ ಜಿಲ್ಲೆಗಳಲ್ಲಿ ಕಲ್ಲು ಮತ್ತು ಮರಳು ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಕುರಿತು ಹರಿಯಾಣ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

Key words: Congress, MLA, arrested, ED