ಚನ್ನಪಟ್ಟಣದಿಂದ ಸಿಪಿ ಯೋಗೇಶ್ವರ್  ಕಾಂಗ್ರೆಸ್ ಅಭ್ಯರ್ಥಿ ಆಗಬಹುದು- ಸಚಿವ ಜಮೀರ್ ಅಹ್ಮದ್ ಖಾನ್

ಬೆಂಗಳೂರು,ಅಕ್ಟೋಬರ್,23,2024 (www.justkannada.in): ತೀವ್ರ ಜಿದ್ದಾಜಿದ್ದಿನ ರಾಜಕಾರಣಕ್ಕೆ ಸಾಕ್ಷಿಯಾಗಿರುವ   ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಅಖಾಡ ರಂಗೇರಿದ್ದು ಈಗಾಗಲೇ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೂ ಗುಡ್ ಬೈ ಹೇಳಿರುವ ಸಿಪಿ ಯೋಗೆಶ್ವರ್ ಕಾಂಗ್ರೆಸ್ ಸೇರಲು ಸಜ್ಜಾಗಿ ನಿಂತಿದ್ದಾರೆ.

ಈ ಕುರಿತು ಮಾತನಾಡಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಸಿಪಿ ಯೋಗೇಶ್ವರ್  ಪಕ್ಷ ಸೇರ್ಪಡೆಗೆ ಯಾವುದೇ ಬೇಡಿಕೆ ಇಟ್ಟಿಲ್ಲ. ಚನ್ನಪಟ್ಟಣ ಉಪಚುನಾವಣೆಗೆ ಸಿಪಿ ಯೋಗೇಶ್ ಅವರೇ ಅಭ್ಯರ್ಥಿಯಾಗಬಹುದು.  ಈ ಹಿಂದೆ ಯೋಗೇಶ್ವರ್ ಕಾಂಗ್ರೆಸ್ ನಲ್ಲೇ ಇದ್ದರು. ಈಗ ಘರವಾಪ್ಸಿ ಆಗಿದ್ದಾರೆ ಎಂದು ತಿಳಿಸಿದ್ದಾರೆ.

Key words: CP Yogeshwar, become, Congress candidate, Jameer