ನಾನು ಆ ರೀತಿ ಹೇಳಿದ್ದರೇ ರಾಜಕೀಯ ನಿವೃತ್ತಿ- ಡಿಸಿಎಂ ಡಿಕೆ ಶಿವಕುಮಾರ್ ಸವಾಲು

ಬೆಂಗಳೂರು,ಮಾರ್ಚ್,25,2025 (www.justkannada.in): ಡಿಕೆ ಶಿವಕುಮಾರ್ ಸಂವಿಧಾನ ಬದಲಾವಣೆ ಮಾತುಗಳನ್ನಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿ ಪ್ರತಿಭಟನೆ ನಡೆಸಿದ್ದು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಆದರೆ ಈ ಆರೋಪವನ್ನ ತಳ್ಳಿಹಾಕಿರುವ ಡಿಸಿಎಂ ಡಿಕೆ ಶಿವಕುಮಾರ್, ನಾನು ಆ ರೀತಿ ಹೇಳಿದ್ದರೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಎಸೆದಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ಸಂವಿಧಾನ ಬದಲಾವಣೆ ಬಗ್ಗೆ ನಾನು ಮಾತನಾಡಿಲ್ಲ. ನನ್ನ ನಿಲುವಿನ ಬಗ್ಗೆ ಅವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ನಾನು ಸಂವಿಧಾನ ಬದಲಾವಣೆ ಮಾಡುತ್ತೇನೆಂದು ಹೇಳಿಲ್ಲ.  ಸಂವಿಧಾನ ರಕ್ಷಣೆ ಮಾಡುತ್ತಿರುವುದೇ ಕಾಂಗ್ರೆಸ್.  ನನ್ನ ಹೇಳಿಕೆ ಒಮ್ಮೆ ನೋಡಿ . ನಾನು ಆ ರೀತಿ ಹೇಳಿದ್ದರೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದರು.

Key words: Constitutional Change,  retired,  politics – DCM, DK Shivakumar