ಬೆಂಗಳೂರು, ಫೆಬ್ರವರಿ 28,2025 (www.justkannada.in): ಇಡ್ಲಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ಬಳಿಕ ಇದೀಗ, ಟ್ಯಾಟೂನಿಂದ ಎಚ್ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಹೊಸ ಕಾನೂನು ರೂಪಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ಟ್ಯಾಟೂನಿಂದ ಆರೋಗ್ಯ ಸಮಸ್ಯೆಗಳ ಸಾಧ್ಯತೆ ವಿಚಾರವಾಗಿ ಕೇಂದ್ರ ಸರ್ಕಾರ ನಿಯಮ ರೂಪಿಸಲು ಅವಕಾಶ ಇದೆ. ಟ್ಯಾಟೂ ಇಂಕ್ ಕಾಂತಿ ವರ್ಧಕಗಳ ಅಡಿಯಲ್ಲಿ ತರಲು ಪತ್ರ ಬರೆಯಲಾಗುವುದು. ಆಯುಕ್ತರಿಗೆ ಪತ್ರ ಬರೆದು ಮನವಿಗೆ ಸೂಚನೆ ನೀಡಲಾಗಿದೆ. ಹೀಗಾಗಿ ಪತ್ರ ಬರೆದು ಕಾನೂನು ರೂಪಿಸಲು ಮುಂದಾಗಿದ್ದೇವೆ ಎಂದರು.
ಜವವರಿಯಿಂದ ಈವರೆಗೆ 3608 ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ 26 ಮಾದರಿಗಳು ಅಸುರಕ್ಷಿತವಾಗಿದೆ ಎಂಬ ವಿಚಾರ ತಿಳಿದು ಬಂದಿದೆ. ಇದೇ ಜನವರಿಯಲ್ಲಿ 681 ರಷ್ಟು ಇಡ್ಲಿ ಸ್ಯಾಂಪಲ್ಸ್ ಪಡೆಯಲಾಗಿದ್ದು, ಇಡ್ಲಿ ಮಾಡುವಾಗ ಪ್ಲಾಸ್ಟಿಕ್ ಬಳಸುತ್ತಿರುವುದರಿಂದ ಅಸುರಕ್ಷಿತ ಎಂಬ ವರದಿ ಬಂದಿದೆ. ಘಟನೆ ಸಂಬಂಧ 52 ಆಹಾರ ಉತ್ಪಾದಕರಿಗೆ ನೋಟಿಸ್ ನೀಡಲಾಗಿದೆ. ಪ್ಲಾಸ್ಟಿಕ್ ಬಳಕೆ ಮಾಡದಂತೆ ಈಗಾಗಲೇ ನಾವು ಎಚ್ಚರಿಕೆ ನೀಡಿದ್ದೇವೆ ಎಂದು ಗುಂಡೂರಾವ್ ತಿಳಿಸಿದರು.
ಹಾಗೆಯೇ 1133 ಔಷಧ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ, 938 ಔಷಧಗಳು ಗುಣಮಟ್ಟ ಹೊಂದಿವೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
Key words: Tattoo, HIV, cancer, Minister, Dinesh Gundu Rao, Center, new law