ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಬಿಡಿ: ಡಿ.ವಿ ಸದಾನಂದ ಗೌಡ ವಾಗ್ದಾಳಿ

ಮೈಸೂರು,ಫೆಬ್ರವರಿ,12,2025 (www.justkannada.in): ಮೆಟ್ರೋ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಬಿಡಿ ಎಂದು ರಾಜ್ಯ ಸರಕಾರದ ವಿರುದ್ದ ಮಾಜಿ ಕೇಂದ್ರ ಸಚಿವ ಡಿವಿ ಸದಾನಂದಗೌಡ ವಾಗ್ದಾಳಿ ನಡೆಸಿದರು.

ಟಿ ನರಸೀಪುರದ ತ್ರಿವೇಣಿ ಸಂಗಮದಲ್ಲಿ ಮಾತನಾಡಿದ ಮಾಜಿ ಸಿಎಂ ಡಿ ವಿ ಸದಾನಂದಗೌಡ, ಮೆಟ್ರೋ ದರ ಏರಿಕೆ ಸಂಬಂಧ ರಾಜ್ಯ ಸರ್ಕಾರ ವಿಶೇಷ ಒತ್ತಡ ಹಾಕುವುದು ಪ್ರಥಮ ಜವಾಬ್ದಾರಿ.  ಕೇಂದ್ರದ ಮೇಲೆ  ಬೊಟ್ಟು ಮಾಡುವುದನ್ನು ಬಿಡಿ. ಮೆಟ್ರೋ ದರ ಕಡಿಮೆ ಆಗಬೇಕು. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು. ರಾಜ್ಯ ಸರಕಾರ ಮೊದಲು ಒತ್ತಡ ಹಾಕಬೇಕು. ರಾಜ್ಯ ಸರ್ಕಾರ ಕರೆದರೆ ಕೇಂದ್ರದ ಬಳಿಗೆ ನಾವು ಜೊತೆಯಾಗಿ ಹೋಗುತ್ತೇವೆ  ಎಂದರು.

ಯಾವಾಗ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತದೆಯೋ ಆಗೆಲ್ಲಾ ಒಂದು ಕೋಮಿನ ಜನರು ಕಾನೂನನ್ನು ಕೈಗೆತ್ತಿಕೊಳ್ಳುತ್ತಾರೆ. ಪರಮೇಶ್ವರ್ ಗೆ ಕಾನೂನು ಸುವ್ಯವಸ್ಥೆ ನಿಭಾಯಿಸಲು ಬರುತ್ತಿಲ್ಲ. ಸಿಎಂ ತಲೆಯಲ್ಲಿ ಬರೀ ಮುಡಾ ತುಂಬಿದೆ. ಸಿದ್ದರಾಮಯ್ಯ ಹೆಸರಿನಲ್ಲಿ ಇರುವ ಸಿದ್ದ ಎಂಬುದನ್ನು ತೆಗೆಯಬೇಕಾದ ಸ್ಥಿತಿ ಬಂದಿದೆ. ಆ ಮಟ್ಟಕ್ಕೆ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆದಾಗ ಬದಲಾಗಿದ್ದಾರೆ. ಪರಮೇಶ್ವರ್ ಕೇವಲ ಕುರ್ಚಿಗೆ ಅಂಟಿಕೊಂಡು ಕುಳಿತಿದ್ದಾರೆ. ರಾಜಣ್ಣ, ಜಾರಕಿಹೊಳಿ, ಪರಮೇಶ್ವರ್ ಯಾರು ಮಂತ್ರಿ ಕೆಲಸ ಮಾಡುತ್ತಿಲ್ಲ. ಬರೀ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಇದು ಅತ್ಯಂತ ಭ್ರಷ್ಟ ಸರ್ಕಾರ.- ಎರಡು ಕಡೆ ಪುಣ್ಯಸ್ನಾನ ಮಾಡಿ ಡಿ ಕೆ ಶಿವಕುಮಾರ್ ಅವರ ಪಾಪ ಸ್ವಲ್ಪ ಪರಿಹಾರ ಆಗಿರಬಹುದು. ಸ್ವಯಂಕೃತ ಅಪರಾಧದಿಂದ ಸಿದ್ದರಾಮಯ್ಯ ಕೆಳಗೆ ಇಳಿಯುತ್ತಾರೆ.  ಹೈಕಮಾಂಡ್ ಬೆಂಬಲದಿಂದಷ್ಟೇ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬಹುದು ಎಂದು ಡಿವಿ ಸದಾನಂದಗೌಡ ಹೇಳಿದರು.

ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿವಿ ಸದಾನಂದಗೌಡ, ನನ್ನ ಪಕ್ಷಕ್ಕೆ ಈ ಪರಿಸ್ಥಿತಿ ಬರಬಾರದಿತ್ತು.  ನಮ್ಮಲ್ಲಿ ಆಂತರಿಕ ಅವ್ಯವಸ್ಥೆ ಇದೆ. ನಮ್ಮ ಪಕ್ಷ ರಾಜ್ಯದಲ್ಲಿ ದಯಾನೀಯ ಸ್ಥಿತಿ‌ಯಲ್ಲಿದೆ. ಹೈಕಮಾಂಡ್ ಮಧ್ಯ ಪ್ರವೇಶಿಸಬೇಕು. ಸಾಕು ಇನ್ನೂ ಈ ಮೌನ‌.  ನಮ್ಮ ಜಗಳ ಹೆಚ್ಚಾಗಿದ್ದು ಕಾಂಗ್ರೆಸ್ ಗೆ ಸ್ವಲ್ಪ ಪ್ಲಸ್ ಪಾಯಿಂಟ್ ಆಗಿದೆ. ಒಂದು ವಾರ ಕಾಯಿರಿ.‌ ಎಲ್ಲಾ ಸರಿ ಆಗುತ್ತದೆ ಎಂದರು.

Key words: Stop, criticizing,  Centre, DV Sadananda Gowda