ಬಿಜೆಪಿ ನಾಯಕರ ವಿರುದ್ದ ಚುನಾವಣಾ ಬಾಂಡ್ ಕೇಸ್: ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್

ಬೆಂಗಳೂರು, ಸೆಪ್ಟೆಂಬರ್ 30,2024 (www.justkannada.in): ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ದ ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

​ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಆದರ್ಶ ಅಯ್ಯರ್ ಅವರು ಬೆಂಗಳೂರಿನ ತಿಲಕ್​ ನಗರ ಠಾಣೆಗೆ ದೂರು ದಾಖಲಿಸಿದ್ದರು. ಈ ಕುರಿತು ಎಫ್ ಐಆರ್ ದಾಖಲಾಗಿತ್ತು. ನಂತರ  ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್​ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಇಂದು (ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ಹೈಕೋರ್ಟ್ ಮುಂದೂಡಿಕೆ ಮಾಡಿದೆ. . ಮುಂದಿನ ವಿಚಾರಣೆವರೆಗೂ  ತನಿಖೆ ನಡೆಸದಂತೆ ತಡೆ ನೀಡಿದೆ. ಈ ಮೂಲಕ ನಳೀನ್ ಕುಮಾರ್ ಕಟೀಲ್​ ಜೊತೆಗೆ ಇನ್ನಿತರರಿಗೂ ರಿಲೀಫ್ ಸಿಕ್ಕಂತಾಗಿದೆ.

Key words: Election bond, case, BJP leaders, High Court, stay