ಶಿವಮೊಗ್ಗ, ಫೆಬ್ರವರಿ 11,2025 (www.justkannada.in): ಮಹಿಳಾ ಅಧಿಕಾರಿಗೆ ನಿಂದನೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹಳೇನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಶಿವಮೊಗ್ಗ ಜಿಲ್ಲೆ ಕಾಂಗ್ರೆಸ್ ಶಾಸಕ ಸಂಗಮೇಶ್ ಪುತ್ರ ಬಸವೇಶ್ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಆದರೆ ಎಫ್ಐಆರ್ ನಲ್ಲಿ ಶಾಸಕರ ಪುತ್ರನ ಹೆಸರು ಉಲ್ಲೇಖಿಸದೆ ಆರೇಳು ಮಂದಿ ವಿರುದ್ದ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ ಎನ್ನಲಾಗಿದೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹಳೇನಗರ ಠಾಣೆಯಲ್ಲಿ ಬಿಎನ್ಎಸ್ 132, 352, 351/2, 189/2,190 BNS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಿ.ಎಸ್. ಬಸವೇಶ್ ಗೆ ಸಂಬಂಧಿಸಿದ ಅಕ್ರಮ ಮರಳುಗಾರಿಕೆಯನ್ನ ತಡೆಯಲು ಭೂ ವಿಜ್ಞಾನಿ ಜ್ಯೋತಿ ಬಂದಿದ್ದು. ಇದೇ ವೇಳೆ ಬಸವೇಶ ಆಪ್ತರೊಬ್ಬ ಅಧಿಕಾರಿ ಜ್ಯೋತಿ ಅವರಿಗೆ ಫೋನ್ ಮಾಡಿ ಮಾತಾಡಿ ಅಂತ ಕೊಟ್ಟಿದ್ದರು. ಈ ವೇಳೆ ನಿಂದಿಸಿದ್ದಾರೆ ಎಂಬ ಆರೋಪವಿದೆ. ಈ ಸಂಬಂಧ ವಿಡಿಯೋ ವೈರಲ್ ಆಗಿತ್ತು.
Key words: FIR, filed ,alleged, abuse , officer