ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಜೂನ್,1,2023(www.justkannada.in):  ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳನ್ನ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸುತ್ತಿದ್ದು ಈ ಹಿನ್ನೆಲೆಯಲ್ಲಿ  ಸಿಎಂ ಸಿದ್ಧರಾಮಯ್ಯರಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ.

ರಾಜ್ಯ ಸರ್ಕಾರದಿಂದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಿನ್ನೆಲೆ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಯೋಜನೆಗಳನ್ನು ಮೊಟಕುಗೊಳಿಸಬಾರದು. ಹಾಗೆಯೇ ಯೋಜನೆಗಳಿಗೆ ಅನುದಾನ ಕಡಿತಗೊಳಿಸಬಾರದು ಎಂದು  ಸಿಎಂ ಸಿದ್ಧರಾಮಯ್ಯಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಪತ್ರದ ಮೂಲಕ ಮನವಿ ಮಾಡಿದ್ದಾರೆ.

Key words: Former CM- Basavaraja Bommai -wrote – letter –CM- Siddaramaiah