ಜರ್ಮನಿ ಪೊಲೀಸ್ ಅಧಿಕಾರಿಗಳೊಂದಿಗೆ ವಿಚಾರಣ ಸಂಕಿರಣ:, ವಿಚಾರ ವಿನಿಮಯ,  ಮಹತ್ವದ ನಿರ್ಧಾರ

ಬೆಂಗಳೂರು,ಅಕ್ಟೋಬರ್,25,2024 (www.justkannada.in): ಜರ್ಮನಿ ದೇಶದ ಬವೇರಿಯಾ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ರಾಜ್ಯ ಪೊಲೀಸ್ ಅಧಿಕಾರಿಗಳಿಂದ ದಿನಾಂಕ: 23.10.2024 ಮತ್ತು 24,10.2024 ರಂದು ಎರಡು ದಿನಗಳ ವಿಚಾರಣ ಸಂಕಿರಣ ಹಮ್ಮಿಕೊಳ್ಳಲಾಗಿತ್ತು.

ತರಬೇತಿ ವಿಭಾಗದ ಎಡಿಜಿಪಿ ಆಲೋಕ್ ಕುಮಾರ್, ಐಪಿಎಸ್ ರವರ ಅಧ್ಯಕ್ಷತೆಯಲ್ಲಿ ನಡೆದ ಈ ವಿಚಾರ ಸಂಕಿರಣದಲ್ಲಿ ಜರ್ಮನಿ ಪೊಲೀಸ್ ಅಧಿಕಾರಿಗಳು ಮತ್ತು ರಾಜ್ಯ ಪೊಲೀಸ್ ಅಧಿಕಾರಿಗಳು ಪರಸ್ಪರ ವಿಚಾರ ವಿನಿಮಯ ಮಾಡಿಕೊಂಡರು.

ಕರ್ನಾಟಕ ಸರ್ಕಾರ ಮತ್ತು ಜರ್ಮನಿ ದೇಶಗಳ ಬಾಂದವ್ಯ ವೃದ್ಧಿ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಜರ್ಮನಿ ದೇಶದ ಬವೇರಿಯಾ ರಾಜ್ಯದ ಪೊಲೀಸ್ ಇಲಾಖೆಯೊಂದಿಗೆ 2016ರಿಂದ ತರಬೇತಿ ವಿಭಾಗದಲ್ಲಿ ಪರಸ್ಪರ ಮಾಹಿತಿ, ಕೌಶಲ್ಯ ಅಭಿವೃದ್ಧಿ ಮತ್ತು ವೃತ್ತಿಪರತೆ, ಕುರಿತು ಸಹಕಾರ ವೃದ್ಧಿಸಲು ಒಪ್ಪಂದ ಮಾಡಿಕೊಂಡಿದ್ದು ಅದರ ಅನ್ವಯ ಎರಡು ರಾಜ್ಯಗಳ ಅಧಿಕಾರಿಗಳು ತರಬೇತಿ ಕುರಿತು ಭೇಟಿ ಹಾಗೂ ಸನ್ನಿವೇಶ ಆಧಾರಿತ ತರಬೇತಿ (Scenario Based Learning) ಅಭಿವೃದ್ಧಿಪಡಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ಬವೇರಿಯಾ ರಾಜ್ಯದ ಜನಸಂಖ್ಯೆ ಅಂದಾಜು 7 ಕೋಟಿಯಷ್ಟಿದ್ದು ಯುರೋಪಿನಲ್ಲಿಯೇ ಉತ್ತಮ ಪೊಲೀಸ್ ವ್ಯವಸ್ಥೆಯನ್ನು ಹೊಂದಿದೆ. ಎರಡೂ ರಾಜ್ಯಗಳ ಪೊಲೀಸ್ ಅಧಿಕಾರಿಗಳಿಗೆ ಕಾನೂನು ಮತ್ತು ಸುವ್ಯವಸ್ಥೆ, ಅಪರಾಧಗಳ ಪತ್ತೆ ಮತ್ತು ನಿಯಂತ್ರಣ, ಮಹಿಳೆಯರ ಮತ್ತು ಮಕ್ಕಳ ವಿರುದ್ಧದ ಅಪರಾಧಗಳು, ಸಂಚಾರ ನಿರ್ವಹಣೆ ಹಾಗೂ ಸೈಬರ್ ಅಪರಾಧಗಳ ಪತ್ತೆ ಮತ್ತು ತಡೆಗಟ್ಟುವಿಕೆ ಕುರಿತು ಪರಿಣಾಮಕಾರಿಯಾಗಿ ಅಧಿಕಾರಿಗಳಿಗೆ ಸನ್ನಿವೇಶ ಆಧಾರಿತ ತರಬೇತಿ ನೀಡುವ ಕುರಿತು ಕೌಶಲ್ಯ ಅಭಿವೃದ್ಧಿಪಡಿಸುವ ಬಗ್ಗೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು.

ಬವೇರಿಯಾ ರಾಜ್ಯದ ತರಬೇತಿ ಮುಖ್ಯಸ್ಥ ಆಂಡ್ರಿಯನ್ ಡೈಟೆಲ್‌ ರವರು ಕರ್ನಾಟಕ ಪೊಲೀಸ್‌ ನ ಎಲ್ಲಾ ತರಬೇತಿ ಶಾಲೆಗಳ ಮುಖ್ಯಸ್ಥರೊಂದಿಗೆ ವಿಚಾರ ವಿನಿಮಯ ಮಾಡಿದರು.

ವಿಚಾರ ಸಂಕಿರಣದಲ್ಲಿ ಜರ್ಮನಿಯ ಬವೇರಿಯಾ ಮತ್ತು ಕರ್ನಾಟಕ ರಾಜ್ಯದ ಮಧ್ಯ ಸಮನ್ವಯ ಸಾಧಿಸುವ ಸಂಸ್ಥೆಯಾದ ಹ್ಯಾನ್ ಸೀಡಲ್ ಫೌಂಡೇಶನ್ ನ ಅಧಿಕಾರಿಗಳಾದ ಜುಡಿತ್ ವೇನ್‌ಭರ್ಗರ್ ಹಾಗೂ ಡಾ. ಅರುಲ್, ಎಡಿಜಿಪಿ   ಬೋರಲಿಂಗಯ್ಯ, ಐಪಿಎಸ್, ನಿರ್ದೇಶಕರು, ಕೆಪಿಎ ಹಾಗೂ ಚೆನ್ನಬಸವಣ್ಣ ಎಸ್.ಎಲ್. ಐಪಿಎಸ್, ಉಪ ನಿರ್ದೇಶಕರು, ಕೆಪಿಎ. ರಾಜ್ಯದ 11 ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರುಗಳು ಹಾಗೂ ಕೆಪಿಎನ ಸಹಾಯಕ ನಿರ್ದೇಶಕರುಗಳು ಹಾಜರಿದ್ದರು.

Key words: German , Police Officers,  decision, exchange of ideas