ನಾನು ಆ ನಕಲಿಗಳಿಗೆಲ್ಲಾ ಉತ್ತರ ಕೊಡಲ್ಲ- ಹೆಚ್.ಡಿಕೆಗೆ ಡಿಸಿಎಂ ಡಿಕೆಶಿ ಪರೋಕ್ಷ ಟಾಂಗ್

ಹಾಸನ,ಆಗಸ್ಟ್,29,2024 (www.justkannada.in):  ಸಿಎಂ ಸಿದ್ದರಾಮಯ್ಯ ಪುತ್ರ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಹಾಸನದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಾನು ಆ ನಕಲಿಗಳಿಗೆಲ್ಲಾ ಉತ್ತರ ಕೊಡಲ್ಲ. ಅಸಲಿಯತ್ತಿಗೆ ಮಾತ್ರ ನಾನು ಉತ್ತರ ಕೊಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಇಂದು ಸಿಬಿಐ ತನಿಖೆ ಬಗ್ಗೆ ತೀರ್ಪು ಪ್ರಕಟ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನನಗೆ ದೇವರು ನ್ಯಾಯಾಲಯದ ಮೇಲೆ ನಂಬಿಕೆ ಇದೆ.  ಅವರು ಏನೇ ನೀಡಿದರೂ ಪ್ರಸಾದದಂತೆ ಸ್ವೀಕಾರ ಮಾಡುತ್ತೇವೆ ಎಂದರು.

Key words: I don’t, answer, fakes, DCM DK Shivakumar, HDK