ಬೆಂಗಳೂರು, ಫೆಬ್ರವರಿ, 21,2025 (www.justkannada.in): ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಙೆ ನೀಡಿದೆ.
ಈ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಮಾರ್ಚ್ 12 ರವರೆಗೆ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಙೆ ನೀಡಿದ್ದು, ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಸಲಹೆ ನೀಡಿದ್ದಾರೆ.
- 2. 2023ರಂದು ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ನೀಡಿದ್ದು, ನಂತರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದು, ಈ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ರೋಹಿಣಿ ಸಿಂಧೂರಿ ಅವರ ಅವಹೇಳನಕಾರಿ ಹೇಳಿಕೆ ನಂತರ 6 ತಿಂಗಳವರೆಗೆ ಸಂಬಳ ನೀಡದೇ ಹುದ್ದೆ ಇಲ್ಲದೇ ವರ್ಗಾಯಿಸಿದ್ದರು. ಈ ಹೇಳಿಕೆಯಿಂದ, ತಂಗಿ, ಪತಿ, ಮಕ್ಕಳಿಗೂ ಮಾನಸಿಕ ಯಾತನೆಯಾಗಿದೆ ಎಂದು ರೂಪಾ ಮೌದ್ಗಿಲ್ ಅವರು ರೋಹಿಣಿ ಸಿಂಧೂರಿ ವಿರುದ್ಧ ಬೆಂಗಳೂರಿನ 7 ನೇ ಎಸಿಎಂಎಂ ಕೋರ್ಟ್ನಲ್ಲಿ ಮಾನನಷ್ಡ ಪ್ರಕರಣ ದಾಖಲಿಸಿದ್ದರು.
Key words: Temporary Relief, IAS Officer, Rohini Sindhuri