ಬೆಂಗಳೂರು, ಮಾರ್ಚ್ 20,2025 (www.justkannada.in): ರಾಜ್ಯದಲ್ಲಿ ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಇದೀಗ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC)ವೂ ಕೂಡ ಬೆಲೆ ಏರಿಕೆಯ ಶಾಕ್ ನೀಡಿದೆ ವಿದ್ಯುತ್ ದರ ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ.
ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ್ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ.
ಈ ಕುರಿತು ಮಾತನಾಡಿರುವ ಸಚಿವ ಶರಣಪ್ರಕಾಶ್ ಪಾಟೀಲ್, ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆ ಆಗುವುದಿಲ್ಲ. ಗೃಹಜ್ಯೋತಿ ಯೋಜನೆಯಿಂದಾಗಿ ನಷ್ಟ ಆಗಿಲ್ಲ. ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ ಎಂದಿದ್ದಾರೆ.
Key words: KERC, people, electricity, rate, hike