ವಿದ್ಯಾರ್ಥಿಗಳನ್ನ ಕಿಡ್ನಾಪ್ ಮಾಡಿ ಅರೆಬೆತ್ತಲೆಗೊಳಿಸಿ ಹಲ್ಲೆ: ಇಬ್ಬರ ಬಂಧನ

ಮಂಗಳೂರು,ಆಗಸ್ಟ್,20,2024 (www.justkannada.in): ಫುಟ್‌ ಬಾಲ್‌ ಪಂದ್ಯಾವಳಿ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು , ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್ ಮಾಡಿ ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ದಿಯಾನ್ ಮತ್ತು ಸಲ್ಮಾನ್ ಬಂಧಿತರು.

ನಗರದ ನೆಹರೂ ಮೈದಾನದಲ್ಲಿ ಆಗಸ್ಟ್ 14ರಂದು ಎರಡು ಪ್ರತಿಷ್ಠಿತ ಕಾಲೇಜಿನ ನಡುವೆ ಫುಟ್‌ ಬಾಲ್‌ ಪಂದ್ಯವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಎರಡು ತಂಡಗಳ ನಡುವೆ ಜಗಳ ನಡೆದಿತ್ತು

ಇದೇ ವಿಚಾರವನ್ನಿಟ್ಟುಕೊಂಡು ಯೆನೆಪೋಯ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳನ್ನು, ಮಾತಾ ಸಂಸ್ಥೆಯ ಓರ್ವ ವಿದ್ಯಾರ್ಥಿಯನ್ನು ದಿಯಾನ್, ತಸ್ಲಿಮ್, ಸಲ್ಮಾನ್ ಹಾಗೂ ಇತರ ಇಬ್ಬರು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳ ಗುಂಪು ಅಪಹರಿಸಿತ್ತು.

ನಂತರ ಮಹಾಕಾಳಿ ಪಡ್ಪು ಭಾಗಕ್ಕೆ ಕರೆದೊಯ್ದು ಹಲ್ಲೆ ನಡೆಸಲಾಗಿದೆ. ಹಲ್ಲೆ ನಡೆಸುವ ಸಂದರ್ಭದಲ್ಲಿ ಮೊಬೈಲ್​ನಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Kidnapping, students, assaulting, Two arrested