ಬೈಕ್ ಗೆ ಲಾರಿ ಡಿಕ್ಕಿ: ತಂದೆ ಮತ್ತು ಮೂವರು ಮಕ್ಕಳು ಸಾವು

ಉಡುಪಿ, ಸೆಪ್ಟೆಂಬರ್, 30,2024 (www.justkannada.in):  ಬೈಕ್ ಗೆ ಲಾರಿ ಡಿಕ್ಕಿಯಾಗಿ ತಂದೆ ಮತ್ತು ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ ಬಳಿ ಈ ಘಟನೆ ನಡೆದಿದೆ. ಸುರೇಶ್ ಆಚಾರ್ಯ(36), ಸಮೀಕ್ಷಾ(7), ಸುಶ್ಮಿತಾ(5) ಸುಶಾಂತ್(2) ಮೃತರು. ಇನ್ನು ಸುರೇಶ್ ಆಚಾರ್ಯ ಪತ್ನಿ ಮೀನಾಕ್ಷಿ ಆಚಾರ್ಯ(32) ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ನಡುವೆ ಸುರೇಶ್ ಆಚಾರ್ಯ ಮೂವರು ಮಕ್ಕಳನ್ನು  ಬೈಕ್ ​ಗೆ ಕೂರಿಸಿಕೊಂಡು  ಧರ್ಮಸ್ಥಳದಿಂದ ಕಾರ್ಕಳಕ್ಕೆ ತೆರಳುತ್ತಿದ್ದರು. ಈ ವೇಳೆ ಬೈಕ್ ಗೆ ಲಾರಿ ಡಿಕ್ಕಿಯಾಗಿದ್ದು,  ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Lorry, collides, bike, four death