ಮದುವೆ ಆಗಲಿಲ್ಲವೆಂದು ಮನನೊಂದು ವ್ಯಕ್ತಿ ಆತ್ಮಹತ್ಯೆ.!

ಕೊಡಗು,ಫೆಬ್ರವರಿ,17,2025 (www.justkannada.in):  ಮದುವೆ ಆಗಲಿಲ್ಲ ಎಂದು ಮನನೊಂದು ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೋಯಿಕೇರಿ ಗ್ರಾಮದಲ್ಲಿ ನಡೆದಿದೆ.

ದಿಲೀಪ್ ಅಲಿಯಾಸ್ ಅನಿ (40) ಮೃತಪಟ್ಟ ವ್ಯಕ್ತಿ. ವಯಸ್ಸು 40 ವರ್ಷ  ವಯಸ್ಸಾದರೂ  ಇನ್ನೂ ಮದುವೆಯಾಗಿಲ್ಲ ಎಂದು ಮನನೊಂದು ದಿಲೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವಿರಾಜಪೇಟೆ  ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:   man, suicide, marriage, kodagu