ಬೆಂಗಳೂರು,ಏಪ್ರಿಲ್,10,2025 (www.justkannada.in): ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ವಿರುದ್ದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ರಾಯರೆಡ್ಡಿ ಹೇಳಿಕೆಯಿಂದ ಮುಜುಗರ ಆಗಿದೆ. ಸಿಎಂ ಸಿದ್ದರಾಮಯ್ಯ , ಕಾಂಗ್ರೆಸ್ ವರಿಷ್ಠರು ಎಐಐಸಿ ಅಧ್ಯಕ್ಷರು ಗಮನಿಸುತ್ತಾರೆ. ಖಂಡಿತವಾಗಿ ಬಸವರಾಜ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ಳುತ್ತಾರೆ ಎಂದರು.
ಬಸವರಾಜ ರಾಯರೆಡ್ಡಿ ಯಾರ ವಿರುದ್ದ ಆರೋಪ ಮಾಡಿದ್ರು ಹೇಳಲಿ ಎಂದು ಸಚಿವ ಎಂ.ಬಿ ಪಾಟೀಲ್ ಆಗ್ರಹಿಸಿದರು.
Key words: Corruption, statement, Action, MLA, Basavaraj Rayareddy, Minister, M.B. Patil