ಬೆಂಗಳೂರು,ಮಾರ್ಚ್,20,2025 (www.justkannada.in): ಗುತ್ತಿಗೆಯಲ್ಲಿ ಮುಸ್ಲೀಮರಿಗೆ 4% ಮೀಸಲಾತಿ ಬಿಲ್ ವಿಧಾನಸಭೆಯಲ್ಲಿ ಮಂಡನೆಯಾದ ಬೆನ್ನಲ್ಲೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಈಗಾಗಲೇ ರಾಜ್ಯಪಾಲರಿಗೆ ಬಿಲ್ ಒಪ್ಪದಂತೆ ಮನವಿ ಮಾಡಿದೆ.
ಈ ಮೀಸಲಾತಿ ಕುರಿತು ಮಾತನಾಡಿರುವ ಬಿಜೆಪಿ ಶಾಸಕ ಅರವಿಂದ ಬೆಲ್ಲದ್, ಮುಸ್ಲೀಮರಿಗೆ 4% ಮೀಸಲಾತಿ ನೀಡುವುದು ಸರಿಯಲ್ಲ. ಧರ್ಮಾಧಾರಿತ ಮೀಸಲಾತಿ ಅಗತ್ಯವಿಲ್ಲ. ಕಾಂಗ್ರೆಸ್ ನಿಂದ ಓಲೈಕೆ ರಾಜಕಾರಣ ನಡೆಯುತ್ತಿದೆ. ಈ ಸಂಬಂಧ ಬಿಜೆಪಿ ಸದನದ ಒಳಗೆ ಹೊರಗೆ ಹೋರಾಟ ಮಾಡುತ್ತೇವೆ. ಮೀಸಲು ಖಂಡಿಸಿ ಕೋರ್ಟ್ ಮೊರೆ ಹೋಗುತ್ತೇವೆ ಎಂದಿದ್ದಾರೆ.
Key words: condemn, 4% reservation, Muslims, MLA, Arvind Bellad