ಮೈಸೂರು ದಸರಾ: ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು,ಅಕ್ಟೋಬರ್,12,2024 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು ಈ ನಡುವೆ ಸಿಎಂ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು.

ಅರಮನೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್,  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರರು ಸಾಥ್ ನೀಡಿದರು.

ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಉತ್ತಮ ಮಳೆಬೆಳೆಯಾಗಿದೆ. ರೈತರ ಮೊಗದಲ್ಲಿ ಮಂದಹಾಸ ತುಂಬಿದೆ. ಎಲ್ಲಾ ಜಿಲ್ಲೆಗಳಲ್ಲೂ ಮಳೆ ಚೆನ್ನಾಗಿ ಆಗಿದ್ದು,  ಈ ಬಾರಿ ಬರಗಾಲ ಆವರಿಸಿಲ್ಲ. ದುಷ್ಟರ ಶಿಕ್ಷೆ ಶಿಷ್ಟರ ರಕ್ಷಣೆಯಾಗಲಿ.  ಇದೊಂದು ಐತಿಹಾಸಿಕ ಕ್ಷಣ ಎಂದು ನುಡಿದರು.

Key words: Mysore Dasara,  CM Siddaramaiah, worship,  Nandi dwaja