ಬಿಜೆಪಿ-ಜೆಡಿಎಸ್ ಪಾದಯಾತ್ರೆ: ಬೆಂಗಳೂರಿನಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ- ಪೊಲೀಸ್ ಆಯುಕ್ತ ದಯಾನಂದ್

ಬೆಂಗಳೂರು,ಆಗಸ್ಟ್,2,2024 (www.justkannada.in):  ಮುಡಾ ಹಗರಣ ಸಂಬಂಧ ನಾಳೆ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ನಾಯಕರು ಪಾದಯಾತ್ರೆ ಹಮ್ಮಿಕೊಂಡಿದ್ದು ಆದರೆ ಬೆಂಗಳೂರಿನಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಪೊಲೀಸ್ ಆಯುಕ್ತ ಬಿ.ದಯಾನಂದ್, ಬೆಂಗಳೂರು ನಗರದಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ.  ಎಲ್ಲಿಂದ ಯಾವ ರೀತಿ ಪಾದಯಾತ್ರೆ ಮಾಡ್ತಾರೆ ಅಂತ ಗೊತ್ತಿಲ್ಲ. ನಗರದಲ್ಲಿ ಪ್ರತಿಭಟನೆ ರ್ಯಾಲಿ, ಪಾದಯಾತ್ರೆಗೆ ಅನುಮತಿ ಇಲ್ಲ ಹೈಕೋರ್ಟ್ ಆದೇಶ ಅನ್ವಯ ಪ್ರತಿಭಟನೆಗೆ ಅನುಮತಿ ಇಲ್ಲ ಆದರೂ ಪೂರಕವಾಗಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳುತ್ತೇವೆ.   ನನ್ನ ಮಟ್ಟದಲ್ಲಿ ಯಾರು ಬಂದೂ ಇದುವವರೆಗೆ ಅನುಮತಿ ಕೇಳಿಲ್ಲ ಎಂದು ತಿಳಿಸಿದರು.

Key words: Padayatra, protest, No permission, Bengaluru, Police Commissioner