ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಹನಿಟ್ರ್ಯಾಪ್ ಪ್ರಕರಣ

ನವದೆಹಲಿ, ಮಾರ್ಚ್,24,2025 (www.justkannada.in):  ರಾಜ್ಯದಲ್ಲಿ ಭಾರಿ ಸುದ್ದಿಯಾಗಿರುವ ಹನಿಟ್ರ್ಯಾಪ್ ಪ್ರಕರಣ ಇದೀಗ  ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿ ಟ್ರ್ಯಾಪ್‌ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ವಿನಯ್ ಕುಮಾರ್ ಸಿಂಗ್ ಅನ್ನೋರಿಂದ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ . ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಪ್ರಸ್ತಾಪವಾಗಿದೆ.  ಸ್ವತಃ ಸಚಿವರೇ ಸದನದಲ್ಲಿ ತಿಳಿಸಿದ್ದಾರೆ . ಸಾರ್ವಜನಿಕ ವಿಶ್ವಾಸ ಕಾಪಾಡಲು ತನಿಖೆ ನಡೆಸಬೇಕು.  ಕೋರ್ಟ್ ನಿಗಾದಲ್ಲಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಅರ್ಜಿದಾರರು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಬಳಿ ಮನವಿ ಮಾಡಿದ್ದಾರೆ. ಶೀಘ್ರವೇ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಒಪ್ಪಿದೆ. ವಿಷಯವನ್ನು ಇಂದು ಅಥವಾ ನಾಳೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಜೆಐ ತಿಳಿಸಿದ್ದಾರೆ.

Key words: Honeytrap case, PIL, Supreme Court