PSI ಪರಶುರಾಮ್ ಸಾವು ಕೇಸ್: ಶಾಸಕ ಮತ್ತು ಪುತ್ರನ ವಿರುದ್ದ FIR ದಾಖಲು

ಯಾದಗಿರಿ,ಆಗಸ್ಟ್,3,2024 (www.justkannada.in)  ಪಿಎಸ್‌ ಐ ಆಗಿದ್ದ ಪರಶುರಾಮ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ 17 ಗಂಟೆಗಳ ಬಳಿಕ ಯಾದಗಿರಿ ನಗರ ಠಾಣೆಯಲ್ಲಿ ಯಾದಗಿರಿ ಶಾಸಕ ಚೆನ್ನರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಪಿಎಸ್‌ ಐ ಪರಶುರಾಮ್  ಪತ್ನಿ ಶ್ವೇತಾ ಅವರ ದೂರು ಆಧರಿಸಿ ಇದೀಗ ಯಾದಗಿರಿ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ ಆರೋಪದ ಅಡಿ ಶಾಸಕ ಚೆನ್ನರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ವಿರುದ್ಧ ಪ್ರಕರಣ ದಾಖಲಾಗಿದೆ.  A1 ಆರೋಪಿಯಾಗಿ ಶಾಸಕ ಚನ್ನಾರೆಡ್ಡಿ ಪಾಟೀಲ್, ಹಾಗೂ A 2 ಆರೋಪಿಯಾಗಿ ಪುತ್ರ ಪಂಪನಗೌಡ ವಿರುದ್ಧ ಎಫ್ ಐಆರ್  ದಾಖಲಾಗಿದೆ.

ವರ್ಗಾವಣೆಗೆ ಸಂಬಂಧಿಸಿದಂತೆ ಶಾಸಕ ಚೆನ್ನಾರೆಡ್ಡಿ ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಪರಶುರಾಮ್ ಮಾನಸಿಕವಾಗಿ ನೊಂದಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Key words: PSI, Parashuram, death, case: FIR, filed