ರೈತರ ಈ ಸಂಕಷ್ಟಕ್ಕೆ ಕಾಂಗ್ರೆಸ್ ಸರ್ಕಾರ ದಿವ್ಯ ನಿರ್ಲಕ್ಷ್ಯವೇ ಕಾರಣ- ಆರ್.ಅಶೋಕ್

ಬೆಂಗಳೂರು,ಆಗಸ್ಟ್,12,2024 (www.justkannada.in): ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್,  ರೈತರ ಈ ಸಂಕಷ್ಟಕ್ಕೆ ಕಾಂಗ್ರೆಸ್ ಸರ್ಕಾರ ದಿವ್ಯ ನಿರ್ಲಕ್ಷ್ಯವೇ ಕಾರಣ. ಕಳೆದ ವರ್ಷ ಬರಗಾಲದಲ್ಲಿ ಸಕಾಲಕ್ಕೆ ಪರಿಹಾರ ಕೊಡಲಿಲ್ಲ. ಈ ವರ್ಷ ದೇವರ ದಯೆಯಿಂದ ಒಳ್ಳೆ ಮಳೆ ಬಂದರೂ ಡ್ಯಾಂನಲ್ಲಿ ನೀರು ಉಳಿಸಿಕೊಳ್ಳಲು ಆಗಲಿಲ್ಲ. ಒಟ್ಟಿನಲ್ಲಿ ಈ ದರಿದ್ರ  ಕಾಂಗ್ರೆಸ್ ಸರ್ಕಾರ ಇರುವವರೆಗೂ ನಾಡಿನ ರೈತರಿಗೆ ನೆಮ್ಮದಿ ಇಲ್ಲ ಎಂದು ಕಿಡಿಕಾರಿದ್ದಾರೆ.

ನಿನ್ನೆ ಕೊಪ್ಪಳ ಜಿಲ್ಲೆ ಮುನಿರಾಬಾದ್ ಬಳಿ ಇರೋ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದು, ಇದರಿಂದ ನೀರು ಪೋಲಾಗುತ್ತಿದೆ. ಈ ನಡುವೆ ಜಲಾಶಯದಿಂದ ನದಿಗೆ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

Key words: Tungabhadra Reservoir, Crust Gate, R.Ashok